Kuladalli Keelyavudo huchchappaa.. Lyrics of Sathya Harischandra

DOWNLOAD THE SONG FROM HERE FOR FREE

ಸಾಹಿತ್ಯ: ಹುಣಸೂರು ಕೃಷ್ಣಮೂರ್ತಿ
ಸಂಗೀತ: ಘಂಟಸಾಲ
ಗಾಯನ: ಘಂಟಸಾಲ

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ
ಹಹಹಹಾ
ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹೇ.. ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಓ ದಿದ್ದಿರಿ ಓ ದಿದ್ದಿರಿ
ಓ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ

ತಿಲಕ ಇಟ್ಟರೆ ಸ್ವರಗವು ಸಿಗದು
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ತಿಲಕ ಇಟ್ಟರೆ ಸ್ವರಗವು ಸಿಗದು
ವಿಭೂತಿ ಬಳಿದರೆ ಕೈಲಾಸ ಬರದು
ವಿಭೂತಿ ಬಳಿದರೆ ಕೈಲಾಸ ಬರದು
ಇಟ್ಟ ಗಂಧಾ ಬೂದಿ ನಾಮ
ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ
ಇಟ್ಟ ಗಂಧಾ ಬೂದಿ ನಾಮ
ಕತ್ತ ಕತ್ತಲು ನಿರನಾಮಾ..

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹ್ಯ..
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಓ ದಿದ್ದಿರಿ ಓ ದಿದ್ದಿರಿ
ಓ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ

ಸೈವರಿಗೆಲ್ಲಾ ಸಿವದೊಡ್ಡೋನು
ಹೆ ಹೆ ಹೆಹೆ ಹೆ ಹೆ ಹೆಹೆ
ವೈಷ್ಣವರಿಗೆ ಹರಿ ಸರ್ವೋತ್ತಮನು
ಹೊ ಹೊ ಹೊಹೊ ಹೊ ಹೊ ಹೊಹೊ
ಸೈವರಿಗೆಲ್ಲಾ ಸಿವದೊಡ್ಡೋನು
ವೈಷ್ಣವರಿಗೆ ಹರಿ ಸರ್ವೋತ್ತಮನು
ಉತ್ತಮ ಮಧ್ಯಮ ಅಧಮರೆಲ್ಲರು
ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ
ಉತ್ತಮ ಮಧ್ಯಮ ಅಧಮರೆಲ್ಲರು
ಸತ್ತಮೇಲೆ ಸಮರಾಗ್ತಾರು..

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹಹ್ಯಾ..
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಓ ದಿದ್ದಿರಿ ಓ ದಿದ್ದಿರಿ
ಓ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ

ತಲೆಗೊಂದು ರೀತಿ ನೀತಿಯ ಜಾತಿಯ
ಹೇಳುವ ಜೋತೀಶಿದ್ದರು ಗುರುಗಳು
ತಲೆಗೊಂದು ರೀತಿ ನೀತಿಯ ಜಾತಿಯ
ಹೇಳುವ ಜೋತೀಶಿದ್ದರು ಗುರುಗಳು
ಏಯ್..
ಮಸಣದಲ್ಲಿ ಈ ವೀರಬಾಹುವ
ಮಸಣದಲ್ಲಿ ಈ ವೀರಬಾಹುವ
ಕೈಯ ಮೇಲ್ಗಡೆ ಬೂದಿಯಾಗ್ತರು

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹಹಹಹಹಹಾ
ಹೊಯ್
ಕೀಳ್ಯಾವ್ದು ಮೇಲ್ಯಾವುದೋ..
ಹೊಯ್
ಕೀಳ್ಯಾವ್ದು ಮೇಲ್ಯಾವುದೋ..

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು