Manasaare- Ello Maleyaagide Endu Thangaaliyu

ಚಿತ್ರ:ಮನಸಾರೆ
ಸಾಹಿತ್ಯ: ಜಯಂತ್ ಕಾಯ್ಕಿಣಿ
ಸಂಗೀತ: ಮನೋಮೂರ್ತಿ
ಗಾಯಕ: ಸೋನು ನಿಗಮ್

ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ... ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲೀ... ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...

ಕಣ್ಣಲಿ ಮೂಡಿದೆ ಹನಿಗವನ... ಕಾಯಿಸಿ ನೀ ಕಾಡಿದರೆ...
ನೂತನ ಭಾವದ ಆಗಮನ... ನೀ ಬಿಡದೇ... ನೋಡಿದರೇ...
ನಿನ್ನ ಧ್ಯಾನದಿ ನಿನ್ನದೆ ತೋಳಿನಲಿ ಹೀಗೆಯೇ ಇರಬಹುದೇ?
ಈ ಧ್ಯಾನವ ಕಂಡರೆ ದೇವರಿಗೂ ಕೊಪವು ಬರಬಹುದೇ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು ಕನಸೊಂದು ಬೀಳುತಿದೆ...

ನೆನಪಿನ ಹೂಗಳ ಬೀಸಣಿಕೆ ನೀ ಬರುವ ದಾರಿಯಲಿ...
ಓಡಿದೆ ದೂರಕೆ ಬೀಸಲಿಕೆ ನೀನಿರುವ ಊರಿನಲಿ...
ಅನುಮಾನವೇ ಇಲ್ಲದೆ ಕನಸಿನಲಿ ಮೆಲ್ಲಗೆ ಬರಬಹುದೇ?
ಅಲೆಮಾರಿಯ ಹೃದಯದ ಡೇರೆಯಲಿ ನೀನು ಇರಬಹುದೇ?

ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ... ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲೀ... ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು